ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Cross references
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.
ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.
ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ