Home Bibles ಸಭಾಪ್ರಸಂಗಿ 9:18 · ಕನ್ನಡ ಬೈಬಲ್
ಸಭಾಪ್ರಸಂಗಿ 9:18 · ಕನ್ನಡ ಬೈಬಲ್

ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.

Cross references

ಯೆಹೋಶುವ 7:1

ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.

ಯೆಹೋಶುವ 7:5

ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.

ಯೆಹೋಶುವ 7:11

ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.

ಯೆಹೋಶುವ 22:20

ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.

1 ಸಮುವೇಲ 14:28

ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.

1 ಸಮುವೇಲ 14:30

ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.

1 ಸಮುವೇಲ 14:36

ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು.

2 ಸಮುವೇಲ 20:1

ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.

ಯೋಬ 35:8

ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.

ಸಭಾಪ್ರಸಂಗಿ 7:19

ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.

ಸಭಾಪ್ರಸಂಗಿ 9:16

ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.

ಸಭಾಪ್ರಸಂಗಿ 10:1

ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.

ಸಭಾಪ್ರಸಂಗಿ 10:10

ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.

2 ತೆಸಲೋನಿಕದವರಿಗೆ 2:8

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

2 ತಿಮೋಥೆಯ 2:16

ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.

2 ತಿಮೋಥೆಯ 3:8

ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.

2 ತಿಮೋಥೆಯ 4:3

ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.

ತೀತ 1:10

ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;

ಹೆಬ್ರಿಯರಿಗೆ 12:15

ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

Interlinear

Choose Theme