ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
ದೇವರು ಅವರ ಕಡೆಗೆ ಬಾಣವನ್ನು ಎಸೆಯು ವಾಗ ಫಕ್ಕನೆ ಅವರಿಗೆ ಗಾಯಗಳಾಗುವವು.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.