ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
Cross references
ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.
ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.