ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
Cross references
ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--