Home Bibles ಎಫೆಸದವರಿಗೆ 1:13 · ಕನ್ನಡ ಬೈಬಲ್
ಎಫೆಸದವರಿಗೆ 1:13 · ಕನ್ನಡ ಬೈಬಲ್

ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

Cross references

ಕೀರ್ತನೆಗಳು 119:43

ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,

ಯೋವೇಲ 2:28

ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.

ಮಾರ್ಕ 16:15

ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕ 11:13

ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?

ಲೂಕ 24:49

ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.

ಯೋಹಾನ 1:17

ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.

ಯೋಹಾನ 6:27

ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

ಯೋಹಾನ 14:16

ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.

ಯೋಹಾನ 14:26

ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.

ಯೋಹಾನ 15:26

ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆದರಿಕನು ಅಂದರೆ ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ ಆತನು ನನ್ನ ವಿಷಯವಾಗಿ ಸಾಕ್ಷಿ ಕೊಡುವನು.ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.

ಯೋಹಾನ 16:7

ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.

ಅಪೋಸ್ತಲರ ಕೃತ್ಯಗಳು 1:4

ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.

ಅಪೋಸ್ತಲರ ಕೃತ್ಯಗಳು 2:16

ಆದರೆ ಇದು ಪ್ರವಾದಿಯಾದ ಯೋವೇಲನಿಂದ ಹೇಳಲ್ಪಟ್ಟದ್ದಾಗಿದೆ. ಅದೇನಂದರೆ--

ಅಪೋಸ್ತಲರ ಕೃತ್ಯಗಳು 2:33

ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 13:26

ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 4:11

ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.

ರೋಮಾಪುರದವರಿಗೆ 6:17

ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.

ರೋಮಾಪುರದವರಿಗೆ 10:14

ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?

2 ಕೊರಿಂಥದವರಿಗೆ 1:22

ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.

2 ಕೊರಿಂಥದವರಿಗೆ 6:7

ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,

ಗಲಾತ್ಯದವರಿಗೆ 3:14

ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.

ಎಫೆಸದವರಿಗೆ 2:11

ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.

ಎಫೆಸದವರಿಗೆ 4:21

ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.

ಎಫೆಸದವರಿಗೆ 4:30

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಕೊಲೊಸ್ಸೆಯವರಿಗೆ 1:4

ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;

ಕೊಲೊಸ್ಸೆಯವರಿಗೆ 1:21

ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.

1 ತೆಸಲೋನಿಕದವರಿಗೆ 2:13

ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.

2 ತಿಮೋಥೆಯ 2:15

ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.

2 ತಿಮೋಥೆಯ 2:19

ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.

2 ತಿಮೋಥೆಯ 3:15

ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ಹೆಬ್ರಿಯರಿಗೆ 2:3

ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಯಾಕೋಬ 1:18

ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.

1 ಪೇತ್ರ 2:10

ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.

ಪ್ರಕಟನೆ 7:2

ಇದಲ್ಲದೆ ಮತ್ತೊಬ್ಬ ದೂತನು ಜೀವವುಳ್ಳ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಲದಿಂದ ಏರಿ ಬರುವದನ್ನು ಕಂಡೆನು. ಅವನು ಭೂಮಿಯನ್ನೂ ಸಮುದ್ರವನ್ನೂ ಕೆಡಿಸುವ ಅಧಿಕಾರ ಹೊಂದಿದ ಆ ನಾಲ್ಕು ಮಂದಿ ದೂತರಿಗೆ--

Interlinear

Choose Theme