ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
Cross references
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.