ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
Cross references
ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.
ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.