ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
Cross references
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.
ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು.
ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
ನೀವು ಅರಿಯದೆ ಇರುವದನ್ನು ಆರಾಧಿ ಸುತ್ತೀರಿ; ನಾವು ಅರಿತಿರುವದನ್ನೇ ಆರಾಧಿಸುತ್ತೇವೆ; ಯಾಕಂದರೆ ರಕ್ಷಣೆಯು ಯೆಹೂದ್ಯರಿಂದಲೇ.
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು; ಆತನು--ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ--ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬಾತನು ಕ್ರಿಸ್ತನೇ.
ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು