ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
Cross references
ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
ಇಗೋ, ನಿನಗೆ ದೂರವಾಗಿರುವವರು ನಾಶವಾಗುವರು, ನಿನ್ನನ್ನು ಬಿಟ್ಟು ಜಾರತ್ವ ಮಾಡುವವರೆಲ್ಲ ರನ್ನು ಸಂಹರಿಸಿದ್ದೀ.ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;