ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
Cross references
ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
ಇಗೋ, ನಾನು ಅಕ್ರ ಮದಲ್ಲಿ ರೂಪಿಸಲ್ಪಟ್ಟೆನು; ಪಾಪದಲ್ಲಿ ನನ್ನ ತಾಯಿ ನನ್ನನ್ನು ಗರ್ಭಧರಿಸಿದಳು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
ಕಳೆದುಹೋದ ಕಾಲಗಳಲ್ಲಿ ನೀವು ದೇವರನ್ನು ನಂಬದೆ ಇದ್ದೀರಿ; ಆದಾಗ್ಯೂ ಅವರ ಅಪನಂಬಿಕೆಯ ಮೂಲಕ ನೀವು ಈಗ ಹೇಗೆ ಕರುಣೆ ಯನ್ನು ಹೊಂದಿದ್ದೀರೋ
ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ