ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
Cross references
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.