ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
Cross references
ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
ಅವರ ಕೂಗನ್ನೂ ಈ ಮಾತುಗಳನ್ನೂ ನಾನು ಕೇಳಿದಾಗ ಬಹಳ ಕೋಪಿಸಿಕೊಂಡೆನು.
ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ.
ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು.
ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.