ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Cross references
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.
ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.
ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.
ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;
ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.