ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
Cross references
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.
ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.