ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
Cross references
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.