ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
Cross references
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.
ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು.
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
ದೇವರಲ್ಲಿ ಪಕ್ಷಪಾತವಿಲ್ಲ.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.