ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Cross references
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.