ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.
Cross references
ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು.
ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು.