ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
Cross references
ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.