Home Bibles ಎಸ್ತೇರ್ 3:13 · ಕನ್ನಡ ಬೈಬಲ್
ಎಸ್ತೇರ್ 3:13 · ಕನ್ನಡ ಬೈಬಲ್

ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.

Cross references

1 ಸಮುವೇಲ 15:3

ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.

1 ಸಮುವೇಲ 22:19

ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.

2 ದಿನವೃತ್ತಾಂತ 30:6

ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್‌ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್‌ ಮಕ್ಕಳೇ, ಅಬ್ರಹಾಮ್‌ ಇಸಾಕ್‌ ಇಸ್ರಾಯೇಲ್‌ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು.

ಎಸ್ತೇರ್ 7:4

ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.

ಎಸ್ತೇರ್ 8:5

ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.

ಎಸ್ತೇರ್ 8:10

ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.

ಎಸ್ತೇರ್ 8:12

ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.

ಎಸ್ತೇರ್ 9:1

ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.

ಎಸ್ತೇರ್ 9:10

ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.

ಯೋಬ 9:25

ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.

ಯೆಶಾಯ 10:6

ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

ಯೆರೆಮಿಯ 51:31

ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ

ರೋಮಾಪುರದವರಿಗೆ 3:15

ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.

ಯಾಕೋಬ 2:13

ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

Interlinear

Choose Theme