ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
Cross references
ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.
ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.