Home Bibles ಎಸ್ತೇರ್ 3:15 · ಕನ್ನಡ ಬೈಬಲ್
ಎಸ್ತೇರ್ 3:15 · ಕನ್ನಡ ಬೈಬಲ್

ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.

Cross references

ಆದಿಕಾಂಡ 37:25

ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.

ಎಸ್ತೇರ್ 1:10

ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ

ಎಸ್ತೇರ್ 4:16

ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.

ಎಸ್ತೇರ್ 8:15

ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.

ಕೀರ್ತನೆಗಳು 37:7

ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ.

ಸಾಮೇತಿಗಳು 1:16

ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.

ಸಾಮೇತಿಗಳು 4:16

ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.

ಸಾಮೇತಿಗಳು 29:2

ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

ಸಾಮೇತಿಗಳು 31:4

ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;

ಹೊಶೇಯ 7:5

ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.

ಆಮೋಸ 6:6

ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.

ಯೋಹಾನ 16:20

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.

ಪ್ರಕಟನೆ 11:10

ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

Interlinear

Choose Theme