Home Bibles ಎಸ್ತೇರ್ 4:16 · ಕನ್ನಡ ಬೈಬಲ್
ಎಸ್ತೇರ್ 4:16 · ಕನ್ನಡ ಬೈಬಲ್

ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.

Cross references

ಆದಿಕಾಂಡ 18:19

ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

ಆದಿಕಾಂಡ 43:14

ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.

ಯೆಹೋಶುವ 24:15

ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.

1 ಸಮುವೇಲ 19:5

ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.

2 ಸಮುವೇಲ 10:12

ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.

2 ಅರಸುಗಳು 7:4

ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.

2 ದಿನವೃತ್ತಾಂತ 20:3

ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.

ಎಜ್ರಾ 8:21

ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.

ಎಸ್ತೇರ್ 5:1

ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.

ಎಸ್ತೇರ್ 9:31

ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.

ಯೆಶಾಯ 22:12

ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.

ಯೋವೇಲ 1:14

ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.

ಯೋವೇಲ 2:12

ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.

ಯೋನ 3:4

ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.

ಮತ್ತಾಯ 12:40

ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

ಲೂಕ 9:24

ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.

ಯೋಹಾನ 19:22

ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.

ಅಪೋಸ್ತಲರ ಕೃತ್ಯಗಳು 9:9

ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.

ಅಪೋಸ್ತಲರ ಕೃತ್ಯಗಳು 10:7

ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು

ಅಪೋಸ್ತಲರ ಕೃತ್ಯಗಳು 20:24

ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ

ಅಪೋಸ್ತಲರ ಕೃತ್ಯಗಳು 21:13

ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 27:33

ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.

ರೋಮಾಪುರದವರಿಗೆ 16:4

ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.

ಫಿಲಿಪ್ಪಿಯವರಿಗೆ 2:30

ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.

Interlinear

Choose Theme