ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.
ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.
ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.