ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
Cross references
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.
ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.
ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.