ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.
Cross references
ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.