ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
Cross references
ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.