ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
Cross references
ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.
ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತ ವಾದಾಗ ಅವನು ವಷ್ಟಿಯನ್ನೂ ಅವಳು ಮಾಡಿದ್ದನ್ನೂ ಅವಳಿಗೆ ವಿರೋಧವಾಗಿ ನೇಮಿಸಿದ್ದನ್ನೂ ಜ್ಞಾಪಕ ಮಾಡಿಕೊಂಡನು.
ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ.
ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.