ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
Cross references
ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.