ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
Cross references
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.