ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
Cross references
ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು.
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.