ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
Cross references
ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಅವರ ಅಪರಾಧವನ್ನು ಅವರ ಮೇಲೆ ತಿರಿಗಿ ಬರಮಾಡುವನು; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಕರ್ತನು ಅವರನ್ನು ಸಂಹರಿಸುವನು.
ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.