ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
Cross references
ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆ ಯನ್ನೂ ಈ ಆಣೆಯನ್ನೂ ನಾನು ಮಾಡುವದಿಲ್ಲ;
ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.