Home Bibles ಎಸ್ತೇರ್ 9:4 · ಕನ್ನಡ ಬೈಬಲ್
ಎಸ್ತೇರ್ 9:4 · ಕನ್ನಡ ಬೈಬಲ್

ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.

Cross references

ನಿರ್ಗಮಕಾಂಡ 11:3

ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.

ಯೆಹೋಶುವ 6:27

ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.

1 ಸಮುವೇಲ 2:30

ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.

2 ಸಮುವೇಲ 3:1

ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.

1 ದಿನವೃತ್ತಾಂತ 11:9

ಹೀಗೆಯೇ ಸೈನ್ಯಗಳ ಕರ್ತನು ಅವನ ಸಂಗಡ ಇದದ್ದರಿಂದ ದಾವೀದನು ಕ್ರಮೇಣವಾಗಿ ಅಭಿವೃದ್ಧಿಯಾದನು.

1 ದಿನವೃತ್ತಾಂತ 14:17

ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.

ಕೀರ್ತನೆಗಳು 1:3

ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

ಕೀರ್ತನೆಗಳು 18:43

ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.

ಕೀರ್ತನೆಗಳು 92:13

ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.

ಸಾಮೇತಿಗಳು 4:18

ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಸೆಫನ್ಯ 3:19

ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.

ಮತ್ತಾಯ 4:24

ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

Interlinear

Choose Theme