ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
Cross references
ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು.
ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
ಕನಿಕರ ಮತ್ತು ಸತ್ಯದಿಂದ ಅಕ್ರಮವು ಶುದ್ಧೀಕರಿಸಲ್ಪಡುತ್ತದೆ; ಕರ್ತನ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.