ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
Cross references
ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.