ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
Cross references
ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.
ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು.
ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--
ಕರ್ತನು ನಮ್ಮ ಕಣ್ಣುಗಳ ಮುಂದೆ ಐಗುಪ್ತದಲ್ಲಿ ಫರೋಹನ ಮೇಲೆಯೂ ಅವನ ಎಲ್ಲಾ ಮನೆಯವರ ಮೇಲೆಯೂ ಬಹು ಕಠಿಣವಾದ ಬಾಧೆಗಳಿಂದ ಅದ್ಭುತ ಗಳನ್ನೂ ಸೂಚನೆಗಳನ್ನೂ ತೋರಿಸಿದನು.
ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ
ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.
ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.