ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
Cross references
ಅರಣ್ಯದಲ್ಲಿ ಮೂರು ದಿನಗಳು ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಆತನ ಅಪ್ಪಣೆಯಂತೆ ಯಜ್ಞಮಾಡುವೆವು ಎಂದು ಹೇಳಿದನು.
ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.