Home Bibles ನಿರ್ಗಮಕಾಂಡ 12:19 · ಕನ್ನಡ ಬೈಬಲ್
ನಿರ್ಗಮಕಾಂಡ 12:19 · ಕನ್ನಡ ಬೈಬಲ್

ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.

Cross references

ನಿರ್ಗಮಕಾಂಡ 12:15

ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

ನಿರ್ಗಮಕಾಂಡ 12:43

ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.

ನಿರ್ಗಮಕಾಂಡ 12:48

ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.

ನಿರ್ಗಮಕಾಂಡ 23:15

ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)

ನಿರ್ಗಮಕಾಂಡ 30:33

ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.

ನಿರ್ಗಮಕಾಂಡ 34:18

ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್‌ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್‌ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.

ಅಂಕೆಗಳ ಪುಸ್ತಕ 9:13

ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 16:3

ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.

1 ಕೊರಿಂಥದವರಿಗೆ 5:7

ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.

Interlinear

Choose Theme