ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
Cross references
ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
ಮರುದಿನ ಕರ್ತನು ಆ ಕಾರ್ಯವನ್ನು ಮಾಡಿ ದನು; ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲ್ ಮಕ್ಕಳ ಪಶುಗಳಲ್ಲಿ ಒಂದೂ ಸಾಯ ಲಿಲ್ಲ.
ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು.
ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.
ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು.
ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ