ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
Cross references
ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು.
ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.
ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ಆಗ ದೇವರು ದಾನಿಯೇಲನನ್ನು ಕಂಚುಕಿಯರ ಯಜಮಾನನ ದಯೆಯಲ್ಲಿಯೂ ಕರುಣೆ ಯಲ್ಲಿಯೂ ಸೇರಿಸಿದನು.
ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.