ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
Cross references
ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು.
ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು