ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.
Cross references
ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು.
ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
ದೇವರು ಪ್ರತ್ಯಕ್ಷನಾಗಿ ದ್ದಾನೆಂದು ಭೂಮಿಯು ಕಂಪಿಸಿತು; ಮೇಘ ಮಂಡ ಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿ ಬೆಟ್ಟವು ಕದಲಿತು.
ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು.