ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
Cross references
ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು.