ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು.
ಆಗ ಇವರು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು ಅದನ್ನು ತಪ್ಪಿಸಿ ಫಿಲಿಷ್ಟಿಯರನ್ನು ಕೊಂದುಹಾಕಿದರು; ಕರ್ತನು ಮಹಾ ಬಿಡುಗಡೆಯಿಂದ ರಕ್ಷಿಸಿದನು.
ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ದೇವರು ತನ್ನ ಶತ್ರುಗಳ ತಲೆ ಯನ್ನೂ ತನ್ನ ಅಪರಾಧಗಳಲ್ಲಿ ಮುಂದುವರಿಯುವ ತುಂಬು ಗೂದಲಿನ ತಲೆಯನ್ನೂ ಗಾಯಪಡಿಸುತ್ತಾನೆ.
ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.