ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
Cross references
ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು.
ಫರೋ ಹನ ಕುದುರೆಗಳು ಅವನ ರಥಗಳ ಸಂಗಡಲೂ ಸವಾರರ ಸಂಗಡಲೂ ಸಮುದ್ರದೊಳಗೆ ಬಂದಾಗ ಕರ್ತನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರ ಮಾಡಿದನು; ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣನೆಲದ ಮೇಲೆ ಹೋದರು.
ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.