ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
Cross references
ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ.
ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.
ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
ನೀರು ಗಳು ನಿನ್ನನ್ನು ನೋಡಿದವು; ಓ ದೇವರೇ, ನೀರುಗಳು ನಿನ್ನನ್ನು ನೋಡಿ ಭ್ರಮೆಗೊಂಡವು; ಅಗಾಧಗಳು ನಡುಗಿದವು.
ಆತನು ಭೂಮಿಯನ್ನು ದೃಷ್ಟಿಸಲು ಅದು ನಡು ಗುತ್ತದೆ; ಬೆಟ್ಟಗಳನ್ನು ಮುಟ್ಟಲು ಅವು ಹೊಗೆ ಹಾಯುತ್ತವೆ.
ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.