Home Bibles ನಿರ್ಗಮಕಾಂಡ 14:30 · ಕನ್ನಡ ಬೈಬಲ್
ನಿರ್ಗಮಕಾಂಡ 14:30 · ಕನ್ನಡ ಬೈಬಲ್

ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

Cross references

ನಿರ್ಗಮಕಾಂಡ 14:13

ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.

ನ್ಯಾಯಾಧಿಪತಿಗಳು 10:11

ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ?

1 ಸಮುವೇಲ 14:23

ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.

2 ದಿನವೃತ್ತಾಂತ 32:22

ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.

ಕೀರ್ತನೆಗಳು 58:10

ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.

ಕೀರ್ತನೆಗಳು 59:10

ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.

ಕೀರ್ತನೆಗಳು 91:8

ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.

ಕೀರ್ತನೆಗಳು 92:9

ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.

ಕೀರ್ತನೆಗಳು 106:8

ಆದಾಗ್ಯೂ ಆತನು ತನ್ನ ಮಹಾಶಕ್ತಿಯನ್ನು ಅವರಿಗೆ ತಿಳಿಯ ಮಾಡುವ ಹಾಗೆ ತನ್ನ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದನು.

ಕೀರ್ತನೆಗಳು 106:10

ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.

ಯೆಶಾಯ 63:9

ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.

ಹೊಶೇಯ 1:7

ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.

ಯೂದ 1:5

ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

Interlinear

Choose Theme