ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
Cross references
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.